ಪುಟಗಳು

ಮಂಗಳವಾರ, ಡಿಸೆಂಬರ್ 4, 2012

ಅಮೃತೇಶ್ವರೀ ದೇವಿ ಹಲವು ಮಕ್ಕಳ ತಾಯಿ.................Bharath krishna




ಅಮೃತೇಶ್ವರೀ ದೇವಿ ಹಲವು ಮಕ್ಕಳ ತಾಯಿ.................



ಈ ಹಿಂದೆ ರಾವಣನ ಬಂಧುವಾದ ಖರನೆಂಬ ಮಹಾಸುರನು ಶಿವನಿಗೆ ಸಮಾನವಾದ ಪರಾಕ್ರಮ ಉಳ್ಳವನಾಗಿ ದಂಡಕಾರಣ್ಯದಲ್ಲಿ ವಾಸವಾಗಿದ್ದನು. ಆತನ ಪತ್ನಿಯಾದ ಕುಂಭಮುಖಿಯಿಂದಲೂ ತಂಗಿಯಾದ ಶೂರ್ಪನಖಿಯಿಂದಲೂ ದೂಷಣ ತ್ರಿಶಿರಾದಿ ಅನುಚರರಿಂದಲೂ ಕೂಡಿಕೊಂಡು ತನ್ನ ಅಣ್ಣನಾದ ರಾವಣನ ಅಪ್ಪಣೆಯಂತೆ ಲಂಕಾನಗರಿಗೆ ಉತ್ತರದಿಕ್ಕಿನ ಈ ದಂಡಕಾರಣ್ಯವನ್ನು ಪಾಲಿಸುತ್ತಿದ್ದನು.

ಈ ಖರಾಸುರನು ರಾಕ್ಷಸನಾಗಿದ್ದರೂ, ಧರ್ಮಿಷ್ಟನೂ, ಪರಾಕ್ರಮಿಯೂ ಆಗಿದ್ದನಲ್ಲದೇ ಸದಾ ಕಾಲವು ತನ್ನ ಕುಲದೇವನಾದ ಶಂಕರನನ್ನು ಪೂಜಿಸುತ್ತಾ ಇರುತ್ತಿದ್ದನು. ಈತನ ಪತ್ನಿಯಾದ ಕುಂಭಮುಖಿಯೂ ಸಹ ಪತಿವ್ರತಾ ಪಾರಾಯಣಳು, ಸಾಧು ಸ್ವಭಾವದವಳು ಆಗಿದ್ದು ಸದಾಕಾಲ ತನ್ನ ಪತಿಯ ಜೊತೆಯಲ್ಲಿ ಪಾರ್ವತಿ ಪರಮೇಶ್ವರರ ಸೇವೆಯಲ್ಲಿ ತಲ್ಲೀನಳಾಗಿದ್ದಳು.

ಹೀಗಿರಲು ಒಮ್ಮೆ ವಿಹಾರಕ್ಕಾಗಿ ಶೂರ್ಪನಖಿಯನ್ನು ಕೂಡಿ ಕೊಂಡು ಕುಂಭಮುಖಿಯು ವನದಲ್ಲಿ ಸಂಚಾರ ಮಾಡುತ್ತಿರಲು ಮಧುಮಾಸದ ವನಸಿರಿಗೆ ಮನಸೋತ ಅವರೀರ್ವರು ಪುಷ್ಪ ಸಂಗ್ರಹ ಹಾಗೂ ಮಧು ಸಂಗ್ರಹ ಮಾಡುತ್ತಾ ಬೇರೆ ಬೇರೆ ಮಾರ್ಗದಲ್ಲಿ ಹೋದರು. ಆಗ ಇದೇ ಮಾರ್ಗದಲ್ಲಿ ಎಕಮುಖಿ ಮಹರ್ಷಿಗಳ ಪತ್ನಿಯಾದ ಅತಿಪ್ರಭೆ ಎನ್ನುವವಳು ತನ್ನ ಪತಿಯು ನಿಧನ ಹೊಂದಿದುದರಿಂದ ವೈರಾಗ್ಯದಿಂದ ಕೂಡಿದವಳಾಗಿ, ಪ್ರಾಯ ಪ್ರಬುದ್ಧನೂ, ಸುಂದರನೂ, ವಿಧ್ಯಾವಂತನೂ ಆದ ತನ್ನ ಮಗ ಬಹುಶ್ರುತ ಎಂಬವನೊಂದಿಗೆ ತೀರ್ಥಯಾತ್ರೆಗಾಗಿ ಕಾಶಿ ಕ್ಷೇತ್ರಕ್ಕೆ ಪ್ರಯಾಣ ಮಾಡುತ್ತಿದ್ದಳು.

ಹೀಗಿರಲು ಶೂರ್ಪನಖಿಯು ಪತಿಪ್ರಭೆಯ ಮಗನಾದ ಆ ಋಷಿ ಕುಮಾರನನ್ನು ನೋಡಿ ಮೋಹಿತಳಾಗಿ ಪರಿಪರಿಯಾಗಿ ಬೇಡಿದರೂ, ಆತನು ಒಪ್ಪದಿರಲು ಶೂರ್ಪನಖಿಯು ಬಲತ್ಕಾರದಿಂದ ಆತನನ್ನು ಸಂಹರಿಸಿದಳು. ತನ್ನ ಎಕಮಾತ್ರ ಪುತ್ರನ ಮರಣದಿಂದ ಅತಿಪ್ರಭೆಯು ದುಃಖದಿಂದ ರೋಧಿಸುತ್ತಿರುವಾಗ, ಈ ಶಬ್ದವನ್ನು ಕೇಳಿದ ಕುಂಭಮುಖಿಯು ಅಲ್ಲಿಗೆ ಬಂದಳು. ಶೋಕಾಂಧಳಾದ ಅತಿಪ್ರಭೆಯು ಈ ಕುಂಭಮುಖಿಯನ್ನೇ ತನ್ನ ಮಗನನ್ನು ಸಂಹರಿಸಿದ ಶೂರ್ಪನಖಿ ಎಂತ ತಿಳಿದು, ನಿನಗೆ ಮಕ್ಕಳು ಹುಟ್ಟದೇ ಹೋಗಲಿ ಎಂದು ಶಾಪ ಕೊಟ್ಟಳು. ನಂತರ ತನ್ನ ಮಗನ ಮರಣಕ್ಕೆ ಕಾರಣಳಾದವಳು ಕುಂಭಮುಖಿ ಅಲ್ಲವೆಂದು ತಿಳಿದು, ನಿಜಕ್ಕೂ ಮಗನನ್ನು ಸಂಹರಿಸಿದ ಶೂರ್ಪನಖಿಗೆ " ನೀನು ಪುನಃ ರೂಪವಂತನನ್ನು ಮೋಹಿಸಿ ಮಾನಭಂಗ ಹೊಂದಿದವಳಾಗಿ ನಿನ್ನ ವಂಶಕ್ಕೆ ಮೃತ್ಯು ಸ್ವರೂಪಳಾಗೆಂದು " ಶಾಪ ಕೊಟ್ಟು ಸಮೀಪದಲ್ಲಿರುವ ಪ್ರಪಾತಕ್ಕೆ ಹಾರಿ ಪ್ರಾಣ ಕಳೆದುಕೊಂಡಳು. ಈ ರೀತಿ ಋಷಿ ಪತ್ನಿಯ ಶಾಪದಿಂದ ದುಃಖತಪ್ತಳಾದ ಕುಂಭಮುಖಿಯು ನಡೆದ ವಿಚಾರವನ್ನ ತನ್ನ ಪತಿಯಾದ ಖರನಿಗೆ ತಿಳಿಸಿದಳು. ಖರಸುರನು ಶಾಪವು ನಿವಾರಣೆಯಾಗಿ ಮಕ್ಕಳನ್ನು ಪಡೆಯಲು ಮುಂದೇನು ಮಾಡಬೇಕೆಂದು ಯೋಚಿಸಿ ತನ್ನ ಕುಲ ಪುರೋಹಿತರಾದ ಶುಕ್ರಾಚಾರ್ಯರಲ್ಲಿ ಮೊರೆಹೋದನು. ವಿಷಯವನ್ನು ತಿಳಿದ ಶುಕ್ರಾಚಾರ್ಯರು ಖರಸುರನಲ್ಲಿ ಮಾಯಸುರನಿಂದ ನಿರ್ಮಿತವಾದ ಜ್ಯೇಷ್ಠ ಲಿಂಗವನ್ನು ತಂದು ಒಂದು ವರ್ಷ ಪರ್ಯಂತ ದೀಕ್ಷಿತನಾಗಿ ಆ ಲಿಂಗವನ್ನು ಪೂಜಿಸಬೇಕೆಂದು, ಜೋತೆಗೆ ಕುಂಭಮುಖಿಯು ಕೂಡಾ ನಿಷ್ಠೆಯಿಂದ ಜಗದಂಬಿಕೆಯಾದ ಅಮೃತೇಶ್ವರೀ ದೇವಿಯನ್ನ ಪೂಜಿಸಬೇಕೆಂದು ತಿಳಿಸಿದರು.

ಖರಾಸುರನು ಮಾಯಾಸುರನಿದ್ದಲ್ಲಿಗೆ ಹೋಗಿ ಶುಕ್ರಾಚಾರ್ಯರು ಹೇಳಿದ ಆ ಜ್ಯೇಷ್ಠ ಲಿಂಗವನ್ನು ತಂದು, ಮನೋಹರವಾದ ಶುಕಪುರ ಎಂಬ ಸ್ಥಳದಲ್ಲಿ (ಗಿಳಿಯಾರು, ಹರ್ತಟ್ಟು) ಪ್ರತಿಷ್ಠಿಸಿದನಲ್ಲದೇ ಸಮೀಪದಲ್ಲಿಯೇ ಜಗನ್ಮಾತೆಯಾದ ಅಮೃತೇಶ್ವರೀ ದೇವಿಯನ್ನು ಪತಿಷ್ಠಿಸಿ ದಂಪತಿಗಳೀರ್ವರು ಶುಕ್ರಾಚಾರ್ಯರು ತಿಳಿಸಿದಂತೆ ಉಮಾಮಹೇಶ್ವರರನ್ನು ಪೂಜಿಸುತ್ತಿದ್ದರು.

ನಿದ್ರಾಹಾರಗಳನ್ನು ತ್ಯಜಿಸಿ ಅತ್ಯಂತ ಶ್ರದ್ಧೆಯಿಂದ ತಪಸ್ಸನ್ನಾಚರಿಸುತ್ತಿದ್ದ ದಂಪತಿಗಳಿಗೆ ಶಿವನು ಪ್ರತ್ಯಕ್ಷನಾಗಿ ಜ್ಞಾನೋಪದೇಶ ಮಾಡಿದನಲ್ಲದೇ " ಕೆಲವು ಕಾಲಗಳ ನಂತರ ಶ್ರೀ ಮಹಾವಿಷ್ಣುವಿನ ಅವತಾರ ರೂಪನಾದ ಶ್ರೀ ರಾಮಚಂದ್ರನು ಈ ದಂಡಕಾರಣ್ಯಕ್ಕೆ ಬಂದಾಗ ಅವನೊಡನೆ ಯುದ್ದ ಮಾಡಿ ಮುಕ್ತಿ ಹೊಂದುವಿ " ಎಂದು ವರವನ್ನು ಅನುಗ್ರಹಿಸಿ, ಅಲ್ಲಿಯವರೆಗೆ ಇದೇ ಸ್ಥಳದಲ್ಲಿ ನೀನು ಪ್ರತಿಷ್ಠಿಸಿದ ಜ್ಯೇಷ್ಠ ಲಿಂಗವನ್ನು ಅರ್ಚಿಸುತ್ತಾ ಇರು. ಅಲ್ಲದೇ ನಿನ್ನ ನಿತ್ಯಕರ್ಮಾನುಷ್ಠಾನಗಳ ಅನುಕೂಲಕ್ಕಾಗಿ ಸರ್ವತೀರ್ಥ ಸಾನಿಧ್ಯಾ ಉಳ್ಳ ಸರೋವರವನ್ನು ನಿರ್ಮಿಸುತ್ತೇನೆಂದು ತಿಳಿಸಿದನಲ್ಲದೇ ಈ ಸರೋವರದಲ್ಲಿ ಗಂಗಾದಿ ಸಕಲ ತಿರ್ಥಗಳು ಸನ್ನಿಹಿತವಾಗಿರುತ್ತವೆ. ಇನ್ನು ಮುಂದೆ ಈ ಸರೋವರವು " ವರುಣ ತೀರ್ಥವೆಂದು ಪ್ರಸಿದ್ದವಾಗಲಿ " ಎಂದು ಹರಸಿ ಅಂತರ್ಧಾನ ಹೊಂದಿದನು.

ಇದೇ ರೀತಿ ಕುಂಭಮುಖಿಯ ತಪಸ್ಸಿಗೂ ಮೇಚ್ಚಿದ ಅಮೃತೇಶ್ವರೀಯು ಪ್ರತ್ಯಕ್ಷಳಾಗಿ ಕುಂಭಮುಖಿಯಲ್ಲಿ " ಬೇಕಾದ ವರಗಳನ್ನು ಕೇಳು " ಎನ್ನಲು ದೇವಿಯ ದಿವ್ಯಸ್ವರೂಪದರ್ಶನದಿಂದ ಉಂಟಾದ ಸಂತೋಷಾತಿಶಯದಿಂದಲೂ ಋಷಿ ಪತ್ನಿಯ ಶಾಪ ಪ್ರಭಾವದಿಂದಲೂ ಭ್ರಾಂತಳಾಗಿದ್ದ ಕುಂಭಮುಖಿಯು ದೇವಿಯಲ್ಲಿ " ತಾಯೇ ನೀನು ನಿತ್ಯ ಯೌವನೆಯಾಗಿ ಶಿವನಂತಹ ಪುತ್ರರನ್ನು ಬಹಳ ಕಾಲದವರೆಗೆ ಪಡೆ " ಎಂದು ಬೇಡಿದಳು.

ಮಂದಸ್ಮಿತೆಯಾದ ಅಮೃತೇಶ್ವರೀ ದೇವಿಯು ತಥಾಸ್ತು ಎಂದಳು. ಅಲ್ಲದೇ ಕುಂಭಮುಖಿಯಲ್ಲಿ " ಋಷಿ ಶಾಪದಿಂದ ನಿನಗೆ ಮಕ್ಕಳನ್ನು ಪಡೆಯುವ ಭಾಗ್ಯವಿಲ್ಲದ ಕಾರಣದಿಂದಲೇ " ನಾನು ಮಕ್ಕಳನ್ನು ಪಡೆಯುವಂತೆ ಅನುಗ್ರಹಿಸು " ಎಂದು ಕೇಳುವ ಬದಲು " ನೀನು ಮಕ್ಕಳನ್ನು ಪಡೆ " ಎಂದು ಕೇಳಿಕೊಂಡಿರುತ್ತೀ. ಆದರೂ ಚಿಂತಿಸಬೇಡ... ಇನ್ನು ಕೆಲವೇ ಸಮಯದ ನಂತರ ಇಲ್ಲಿಗೆ ಆಗಮಿಸುವ ಶ್ರೀ ರಾಮಚಂದ್ರನಿಂದ ನಿನ್ನ ಪತಿಯಾದ ಖರಾಸುರನಿಗೆ ಮೋಕ್ಷ ಪ್ರಾಪ್ತಿಯಾಗುತ್ತದೆ. ಆಗ ನೀನು ಕೂಡಾ ಅನಾಯಾಸವಾಗಿ ಇಲ್ಲಿಯೇ ನೆಲೆಸಿರುವ ನನ್ನಲ್ಲಿ ಐಕ್ಯವನ್ನು ಹೊಂದುವಿ. ಅನಂತರ ಇದೇ ಸ್ಥಲದಲ್ಲಿ ಶಿವಲಿಂಗ ಸದ್ರಶ್ಯವಾದ ಲಿಂಗಗಳು ಆಗಾಗ ಉತ್ಪತ್ತಿಯಾಗಿತ್ತವೆ. ಇವರೇ ನಿನ್ನ ಮಕ್ಕಳೆಂತ ತಿಳಿ. ಅನಂತರ ನಾನು " ಹಲವು ಮಕ್ಕಳ ತಾಯಿ " ಎಂಬ ಹೆಸರಿನಿಂದ ಪ್ರಸಿದ್ದಿ ಹೊಂದಿದವಳಾಗಿ ಭಕ್ತರಿಗೆ ಅನುಗ್ರಹವನ್ನುಂಟು ಮಾಡುತ್ತಾ ಇಲ್ಲಿ ನೆಲೆಸಿರುತ್ತೇನೆ " ಎಂದು ತಿಳಿಸಿ ಅಲ್ಲಿಯೇ ಅಂತರ್ಧಾನ ಹೊಂದಿದಳು.

ಕೆಲವು ಕಾಲಗಳ ನಂತರ ಸೀತಾ ಸಹಿತನಾದ ಶ್ರೀ ರಾಮಚಂದ್ರನು ವನವಾಸಕ್ಕೆ ಬಂದಾಗ ಶೂರ್ಪನಖಿಯ ನಿಮಿತ್ತವಾಗಿ ಖರಾಸುರನಿಗೂ ಶ್ರೀ ರಾಮನಿಗೂ ಯುದ್ಧವಾಯಿತು. ಶಿವನ ವರಪ್ರಸಾದದಿಂದ ಶ್ರೀ ರಾಮನೇ ಮಹಾವಿಷ್ಣುವಿನ ಅವತಾರವೆಂದು ತಿಳಿದು ಖರಾಸುರನು ಯುದ್ಧ ಮಾಡಿ ಮುಕ್ತಿಯನ್ನು ಹೊಂದಿದನು. ಕುಂಭಮುಖಿಯು ಶ್ರೀ ದೇವಿಯನ್ನು ಧ್ಯಾನ ಮಾಡುತ್ತಾ ಅಮೃತೇಶ್ವರೀ ದೇವಿಯ ಸನ್ನಿಧಿಯಲ್ಲಿ ಐಕ್ಯ ಹೊಂದಿದಳು. ಅಂದಿನಿಂದ ಶ್ರೀ ಅಮೃತೇಶ್ವರೀ ದೇವಿಯನ್ನು " ಹಲವು ಮಕ್ಕಳ ತಾಯಿ " ಎಂದು ಕರೆಯಲಾರಂಭಿಸಿದರು. ಈಗ ಈ ಹೆಸರೇ ಪ್ರಸಿದ್ಧವಾಗಿದೆ.


- ಸ್ಥಳ ಮಹಾತ್ಮೆ ದೇವಸ್ಥಾನದಿಂದ ಪ್ರಕಟವಾದ ಅಧಾರದಿಂದ...

Amritheshwari Halavu makkala Thayee Temple, Kota, Kundapura, Karnataka - 576221 Ph : 0820 -2564681

ಶನಿವಾರ, ಜುಲೈ 21, 2012

ಭತ್ತ ಮಾತ್ರ ತೆಗೆದಿರುವ ಕೆಂಪು ಅಕ್ಕಿ (ಚ್.ಕೆ.ಸತ್ಯಪ್ರಕಾಶ್)

ಭತ್ತ ಮಾತ್ರ ತೆಗೆದಿರುವ ಕೆಂಪು ಅಕ್ಕಿ

ಭತ್ತ ಮಾತ್ರ ತೆಗೆದಿರುವ ಕೆಂಪು ಅಕ್ಕಿ


ಭತ್ತ ಮಾತ್ರ ತೆಗೆದಿರುವ ಕೆಂಪು ಅಕ್ಕಿಯನ್ನೇ ಯಾವಾಗಲೂ ಊಟಕ್ಕೆ ಉಪಯೋಗಿಸಿ ಆನಂದವನ್ನು ಪಡೆಯಿರಿ. ಈ ಅಕ್ಕಿಗೆ ಆಡು ಭಾಷೆಯಲ್ಲಿ ಕೆಂಪು ಮುಂಡಗ ಅಕ್ಕಿ ಅಥವಾ ಕಜ್ಜಾಯ ಅಕ್ಕಿ ಎಂದೂ ಕರೆಯುತ್ತಾರೆ. ಈ ಅಕ್ಕಿಯಲ್ಲಿ ಬೇಕಾದಷ್ಟು ಪೌಷ್ಟಿಕಾಂಶಗಳು ಇವೆ. ಹೊರಗಡೆ ಯಾವುದೇ ಅಂಗಡಿಯಲ್ಲಿ ಇದು ದೊರಕುವಂತಾದ್ದಲ್ಲ. ಕೋಟಿ ರೂಪಾಯಿಗಳನ್ನು ಕೊಟ್ಟರೂ ಸಿಗುವುದಿಲ್ಲ. ಊಟ ಮಾಡುತ್ತಿರುವಾಗಲೇ ಈ ಪೌಷ್ಟಿಕಾಂಶಗಳು ದೇಹದಲ್ಲಿರುವ ಎಲ್ಲ ಕಸಕಡ್ಡಿಗಳನ್ನೂ, ಅತಿಯಾದ ವಾತ ಪಿತ್ತ ಕಫಗಳನ್ನೂ, ಯಾವುದೇ ರೀತಿಯ ಬೆನ್ನುನೋವು, ತಲೆನೋವು, ಸೊಂಟನೋವು, ಕಾಲುನೋವು, ತಲೆಭಾರ, ನಿದ್ರೆ ಸರಿಯಾಗಿ ಬಾರದಿರುವುದು, ಕೊಲೆಸ್ಟರಾಲನ್ನು ಪೂರ್ತಿಯಾಗಿ ಕರಗಿಸುವುದು. ಮುಂದೆ ಎಂದೆಂದಿಗೂ ಕೊಲೆಸ್ಟರಾಲ್ ದೇಹದಲ್ಲಿ ಸೇರಲು ಅವಕಾಶ ಕೊಡುವುದಿಲ್ಲ, ಬ್ಲಡ್ ಶುಗರನ್ನು ೧೦೦ ಕ್ಕೆ ೧೦೦ ರಷ್ಟು ಕಡಿಮೆಮಾಡುವುದು. ಇದನ್ನೆಲ್ಲ ವಿಜ್ನಾನಿಗಳು ದೃಡಪಡಿಸಿದ್ದಾರೆ. ಮನೆಯಲ್ಲಿ ಪಿ.ಸಿ. ಇದ್ದು ಇಂಟರ್ನೆಟ್ ಹಾಕಿಸಿಕೊಂಡಿರುವವರು ಗೂಗಲ್ ನಲ್ಲಿ ಜಾಲಾಡಿನೋಡಿ. ಈ ಕಜ್ಜಾಯ ಅಕ್ಕಿಗೆ ೧೦೦ ಕ್ಕೆ ೧೦೦ ರಷ್ಟು ಕ್ಯಾನ್ಸರ್ ವಾಸಿಮಾಡುವ ಶಕ್ತಿ ಇದೆ.


ಇದಲ್ಲದೆ ಆಸಿಡಿಟಿ, ಗ್ಯಾಸ್ಟ್ರೈಟಿಸ್, ಬೊಜ್ಜು ಈ ಎಲ್ಲವೂ ೧೦೦% ವಾಸಿಯಾಗುತ್ತದೆ. ಇದಲ್ಲದೇ ಮುಖವೂ ಕಾಂತಿಯುಕ್ತವಾಗುತ್ತದೆ. ಕಣ್ಣುಗಳು ಮಿನುಗುತ್ತವೆ. ಚಟುವಟಿಕೆ ಜಾಸ್ತಿಯಾಗುತ್ತದೆ. ಊಟ ಮಾಡಿದ ತಕ್ಷಣ ಹೊಟ್ಟೆ ಭಾರವಾಗುವುದಿಲ್ಲ. ಬ್ಲೋಟಿಂಗ್ ಅನುಭವ ಇರುವುದಿಲ್ಲ. ಹೊಟ್ಟೆಯಲ್ಲಿ ಸಂಕಟವಾಗುವುದೂ ನಿಂತುಹೋಗುತ್ತದೆ. ಹೊಟ್ಟೆ ಯಾವಾಗಲೂ ತಂಪಾಗಿರುತ್ತದೆ. ಮಲಬದ್ದತೆ ನಿರ್ನಾಮವಾಗಿ ದೊಡ್ಡಕರುಳಿನಲ್ಲಿ ಕಟ್ಟಿಕೊಂಡಿರುವ ಅತ್ಯಂತ ಕಟ್ಟಕಡೆ ಪಾಚಿಯೂ ಸಹ ಕೊಚ್ಚಿಕೊಂಡು ಹೋಗುತ್ತದೆ. ಮಲವಿಸರ್ಜನೆಯ ಬಳಿಕ ದೇಹ ಮತ್ತು ಮನಸ್ಸು ಆನಂದಮಯವಾಗುತ್ತದೆ. ಪ್ರತಿದಿನ ಮಲವಿಸರ್ಜನೆಯ ನಂತರ ದೇಹ ಮತ್ತು ಮನಸ್ಸು ಹಗುರವಾಗಿ ಚಟುವಟಿಕೆಯಿಂದ ಕೂಡಿರುತ್ತದೆ. ಕೆಂಪು ಅಕ್ಕಿಯಲ್ಲಿರುವ ಅತ್ಯಂತ ಶಕ್ತಿ ಬೇರೆ ಯಾವುದೇ ಇಲ್ಲ ಎಂದು ಕಾಣಿಸುತ್ತದೆ. ಎಲ್ಲ ಧಾನ್ಯಗಳಿಗೂ ತನ್ನದೇ ಆದ ಶಕ್ತಿ ಇರುತ್ತದೆ. ಎಲ್ಲಾ ಕಾಲಕ್ಕೂ ಹೊಟ್ಟಿನಿಂದ ಕೂಡಿದ ಕೆಂಪು ಅಕ್ಕಿಯೇ ಸರ್ವಶ್ರೇಷ್ಟ ವಾದುದು.


ಬರೆದವರು : ಹೆಚ್.ಕೆ.ಸತ್ಯಪ್ರಕಾಶ್
೯೮೮೬೩ ೩೪೬೬೭

From -http://healthsp1939.blogspot.com/ (ಸತ್ಯ ಹನಸೋಗೆ )


ಹೊಟ್ಟು(ಫೈಬರ್)

ಹೊಟ್ಟು(ಫೈಬರ್)(ಭಾಗ-೧)


ಹೊಟ್ಟು ಎಂದರೆ ಭತ್ತ ಮಾತ್ರ ತೆಗೆದ ತಕ್ಷಣ ಒಳಗಡೆ ಒಂದು ಕವಚವಿರುತ್ತದೆ. ಅದೇ ಮುಖ್ಯವಾದ ಹೊಟ್ಟು. ಆ ಕವಚವನ್ನು ತೆಗೆದು ತಿಂದರೆ ನಾನಾ ರೋಗಗಳು ಉಂಟಾಗುವುವು. ಈಗ ಹಾಲಿ ಸಿಕ್ಕುತ್ತಿರುವುದೆಲ್ಲಾ ಆ ಕವಚ ತೆಗೆದಿರುವ ಅಕ್ಕಿಯೇ. ಆ ಕವಚಕ್ಕೆ ಇಂಗ್ಲೀಷಿನಲ್ಲಿ ಕರ್ನಲ್ ಎಂದೂ ಕರೆಯುತ್ತಾರೆ. ಹೊಟ್ಟು ತಿನ್ನುವವರು ೧೦೦ ರಿಂದ ೧೨೦ ವರ್ಷಗಳವರೆಗೂ ಯಾವುದೇ ರೋಗ ರುಜಿನಗಳಿಲ್ಲದೆ ಸಂತೋಷವಾಗಿ ಬಾಳಬಹುದು. ಎಲ್ಲಾ ಧಾನ್ಯಗಳಲ್ಲೂ ಹೊಟ್ಟು ಇರುತ್ತದೆ. ಹೊಟ್ಟು ದೇಹಕ್ಕೆ ಬಹಳ ಅತ್ಯಗತ್ಯ ವಸ್ತುವಾಗಿರುತ್ತದೆ. ಈ ಹೊಟ್ಟಿನಲ್ಲಿ ಬೇಕಾದಷ್ಟು ಪೌಷ್ಟಿಕಾಂಶ ಇರುತ್ತದೆ. ಹೊರಗಡೆ ಯಾವುದೇ ಔಷಧಿಗಳಲ್ಲಿ ಅಥವಾ ಲೇಹಗಳಲ್ಲಿ ಸಿಗದೇಇರುವ ಪೌಷ್ಟಿಕಾಂಶಗಳು ಈ ಹೊಟ್ಟಿನಲ್ಲಿ ಇರುತ್ತವೆ. ಕೆಂಪು ಅಕ್ಕಿಯ ಹೊಟ್ಟೇ ಅತ್ಯಂತ ಶಕ್ತಿದಾಯಕ ಮತು ತಂಪುಕಾರಕ ಗುಣವನ್ನು ಹೊಂದಿರುವಂಥಾದ್ದು. ಕೆಂಪು ಅಕ್ಕಿಯ ಹೊಟ್ಟಿನಲ್ಲಿ ರೈಸ್ ಬ್ರಾನ್ ಆಯಿಲ್ ತಯಾರುಮಾಡುತ್ತಾರೆ. ಇದಕ್ಕೆ ಹಾರ್ಟ್ ಆಯಿಲ್ ಎಂದೂ ಕರೆಯುತ್ತಾರೆ. ಇದನ್ನು ದೇಶವಿದೇಶಗಳಲ್ಲಿ ಹಾರ್ಟ್ ಅಟ್ಯಾಕ್ ಆಗದಿರಲಿ ಎಂದು ಡಾಕ್ಟರರು ಶಿಫಾರಸು ಮಾಡುತ್ತಾರೆ. ಗೋಧಿಯ ಹೊಟ್ಟು ಉಷ್ಣವನ್ನುಂಟು ಮಾಡುತ್ತದೆ. ಕೆಂಪು ಅಕ್ಕಿ ಮತ್ತು ರಾಗಿ ಮಾತ್ರ ದೇಹಕ್ಕೆ ತಂಪನ್ನು ಉಂಟುಮಾಡುತ್ತದೆ ಮತ್ತು ಇಡೀ ದಿನ ದೇಹ ಮತ್ತು ಮನಸ್ಸನ್ನು ಚುರುಕಾಗಿಟ್ಟಿರುತ್ತದೆ. ಕೆಂಪು ಅಕ್ಕಿ, ಗೋಧಿ, ರಾಗಿ ಮತ್ತು ಎಲ್ಲ ಧಾನ್ಯಗಳಲ್ಲಿ ಈ ಹೊಟ್ಟು ಬೇಕಾದಷ್ಟು ಇರುತ್ತದೆ. ನೀವು ಎಷ್ಟು ಸಲ ತಿಂಡಿ, ಊಟ ಮಾಡುತ್ತೀರೋ ಅಷ್ಟು ಸಲವೂ ಹೊಟ್ಟಿನಿಂದ ಕೂಡಿದ ಆಹಾರವನ್ನೇ ತಿನ್ನಿ. ಇದು ನಿಮ್ಮನ್ನು ೧೦೦ ಕ್ಕೆ ೧೦೦ ರಷ್ಟು ಆರೋಗ್ಯವನ್ನು ಕೊಡುತ್ತದೆ. ಇಡೀ ದಿನ ದೇಹ ಮತ್ತು ಮನಸ್ಸು ಉಲ್ಲಾಸಮಯವಾಗಿರುತ್ತದೆ. ಸ್ವಲ್ಪವೂ ಸಂಕಟವಾಗುವುದಿಲ್ಲ, ಗ್ಯಾಸ್ ಆಗುವುದಿಲ್ಲ, ಗ್ಯಾಸ್ಟ್ರ್‍ಐಟಿಸ್ ಆಗುವುದಿಲ್ಲ, ಹೊಟ್ಟೆ ಭಾರವಾಗುವುದಿಲ್ಲ, ಹೊಟ್ಟೆಯು ಮಲ್ಲಿಗೆ ಹೂವಿನಂತಿರುತ್ತದೆ, ರಾತ್ರಿ ಹೊತ್ತು ಚೆನ್ನಾಗಿ ನಿದ್ರೆ ಬರುತ್ತದೆ, ಮಲಬದ್ಧತೆಯ ಸುಳಿವೇ ಇರುವುದಿಲ್ಲ, ಕರುಳಿನಲ್ಲಿ ಕಟ್ಟಿಕೊಂಡಿರುವ ಅತ್ಯಂತ ಕಟ್ಟಕಡೆ ಪಾಚಿಯೂ ಸಹ ಕೊಚ್ಚಿಕೊಂಡು ಹೊರಟುಹೋಗುತ್ತದೆ. ಮಲವಿಸರ್ಜನೆಯ ನಂತರ ಮನಸ್ಸು ಆನಂದಮಯವಾಗುತ್ತದೆ.


ಹೊಟ್ಟು(ಬ್ರಾನ್)-ಭಾಗ-೨
ಹೊಟ್ಟು (ಬ್ರಾನ್ ಅಥವ ಕರ್ನಲ್) ಇರುವ ಕೆಂಪು ಅಕ್ಕಿ ಸಿಗದೇಇದ್ದಲ್ಲಿ ಫುಡ್ ವರ್ಲ್ಡ್ ಅಥವಾ ದೊಡ್ಡ ಡಿಪಾರ್ಟ್ ಮೆಂಟ್ ಸ್ಟೋರ್ಸ್ ಗಳಲ್ಲಿ ಸಿಗುವ ಸೀರಿಯಲ್(ಧಾನ್ಯಗಳ) ಮತ್ತು ಗೋಧಿಯ ಹೊಟ್ಟು ಸಿಗುತ್ತದೆ. ಇದನ್ನು ಪ್ರತಿದಿನದ ತಿಂಡಿ, ಊಟಗಳ ಜೊತೆಗೆ ಅಥವಾ ಊಟದ ನಂತರ ೩ ರಿಂದ ೬ ಟೀ ಚಮಚದವರೆಗೆ ನೀರಿನಲ್ಲಿ ಮಿಕ್ಸ್ ಮಾಡಿ ಕುಡಿದು ಮೇಲೆ ಒಂದು ದೊಡ್ಡ ಗ್ಲಾಸ್ ನೀರು ಕುಡಿಯಿರಿ. ಅದರ ಆನಂದವನ್ನು ಸ್ವಲ್ಪ ಹೊತ್ತಿನಮೇಲೆ ಅನುಭವಿಸಿರಿ. ಇದಲ್ಲದೆ ಜ್ಯೂಸ್, ಕುದಿಸಿದ ನೀರು, ಹಾಲು, ಮೊಸರು, ಉಪ್ಪಿಟ್ಟು, ಒಗ್ಗರಣೆ ಅವಲಕ್ಕಿ, ಚಿತ್ರಾನ್ನ, ಪಾಯಸ, ಯಾವುದೇ ರೀತಿಯ ಭಾತ್ ಗಳು, ರಾಯತ ಇತ್ಯಾದಿಗಳಿಗೆ ಮಿಕ್ಸ್ ಮಾಡಿ ಉಪಯೋಗಿಸಿ. ಹೊಟ್ಟಿಲ್ಲದೆ ಒಂದು ತುತ್ತನ್ನೂ ತಿನ್ನಬೇಡಿ. ಹೊಟ್ಟು ಜೀವರಕ್ಷಕ ಔಷಧಿಯಾಗಿರುತ್ತದೆ, ಮಲಬದ್ಧತೆಗೆ ಒಳ್ಳೇ ಪ್ರಾಕೃತಿಕ ಆಹಾರ. ನಿಮ್ಮ ದೇಹದಲ್ಲಿರುವ ಎಲ್ಲ ತರಹದ ವಿಷಪದಾರ್ಥಗಳನ್ನು ಹೊಡೆದೋಡಿಸುತ್ತದೆ. ನಿಮ್ಮ ದೇಹಕ್ಕೆ ಅತ್ಯಧಿಕ ಶಕ್ತಿಯನ್ನೂ ಸಹಾ ಕೊಡುತ್ತದೆ. ಹೊಟ್ಟುಳ್ಳ ಪದಾರ್ಥಗಳನ್ನು ಸೇವಿಸುತ್ತಿದ್ದರೆ ಯಾವುದೇ ರೋಗವಿಲ್ಲದೇ ೧೦೦ ರಿಂದ ೧೨೦ ವರ್ಷ ಬಾಳಬಹುದು. ಈಗ ನಾನಾ ರೀತಿಯ ರೋಗ ರುಜಿನಗಳಿಂದ ನರಳುತ್ತಿರುವವರೂ ಸಹಾ ಇದರ ಉಪಯೋಗ ಪಡೆದು ಆರೋಗ್ಯವನ್ನು ಸಂಪಾದಿಸಬಹುದು. ಹೊಟ್ಟು "ಅತ್ಯಾಶ್ಚರ್ಯಕರ ಆಹಾರ", ಅತ್ಯಾಶ್ಚರ್ಯಕರ ಶಕ್ತಿವರ್ಧಕ", "ಅತ್ಯಾಶ್ಚರ್ಯಕರ ಔಷಧಿ", "ಅತ್ಯಾಶ್ಚರ್ಯಕರ ಮಲವಿಸರ್ಜಕ".
ಇಂಥ ಅಮೂಲ್ಯವಾದ ಹೊಟ್ಟನ್ನು ಪ್ರಾಕೃತಿಕವಾಗಿ ’ದೇವರು’ ಸಮಸ್ತ ಜನಕೋಟಿಗೆಲ್ಲಾ ಅರ್ಪಿಸಿದ್ದಾನೆ. ಇಂಥ ಹೊಟ್ಟನ್ನು ಸೇವಿಸಿ ಅತ್ಯಾನಂದವಾದ ಆರೋಗ್ಯವನ್ನು ಪಡೆಯಿರಿ. ದೇವರು ನಿಮಗೆಲ್ಲಾ ಬೇಗ ಒಳ್ಳೆಯದನ್ನು ಮಾಡಲೆಂದು ಹಾರೈಸುತ್ತೇನೆ.

ಭಾನುವಾರ, ಜೂನ್ 17, 2012

ಹಾಳು ಗೋಡೆಯ ಮದ್ಯ..........


ಹಾಳು ಗೋಡೆಯ ಮದ್ಯ ಬಿಡಿ ಕಟ್ಟುವ ಕೆಲಸ
ಅವನಂತೆ,ಅವರಂತೆ ಕಟ್ಟಿದ್ದೆ ನಾನು ಕನಸ ...

ಮಾಡದಿದ್ದರೆ ಕೆಲಸ ಹೊಟ್ಟೆಯ ಹಸಿವು ಕೇಳಬೇಕಲ್ಲ..... 
ಕವಿ ಹೇಳಿದ್ದ ನಡೆ ಮುಂದೆ ನಡೆ ಮುಂದೆ
ನಾನು ಹೇಳಿದ್ದೆ ನಡೆಯಬಹುದು ಮುಂದೆ
ಆದರೆ ಇಲ್ಲಿಲ್ಲ  ನಡೆಯ ಕಲಿಸೋ ಹಡೆದಾಕೆ ಎಂದೆ........

ಇಲ್ಲಿ ಕನಸುಗಳಿಲ್ಲ ,ನೆನಪುಗಳೂ  ಇಲ್ಲ
ವ್ಯಂಗದ  ನಗು ಬಿರಿ ನನ್ನೆಡೆಗೆ ಬರುವ ಬಿಡಿಗಳ ಪ್ರಪಂಚವೆಲ್ಲ 

ಅದೆಲ್ಲ ಹೋಗಲಿ ಬಿಡು ,  ಬಿರುಕು ಗೋಡೆಯ  
ಹೊಂಬೆಳಕು  ನೋಡು ..........

ಮತ್ತೆ ಮತ್ತೆ ಬೆಳಕ ನೋಡುವಾಸೆ

ಬಾನ ನಕ್ಷತ್ರದಂತೆ ನಾ ಮಿನುಗುವಾಸೆ ............

ಮಂಗಳವಾರ, ಜೂನ್ 12, 2012


ಕುಂದಾಪುರದ ಮಿನ  ಪ್ಯಾಟಿ  ಕವನ

ಆ ರಾತ್ರಿ ತಿಂಗಳ ಬೆಳಕ ಕಾಣ ಹೆಣಾ
ಅದ್ರಕಿಂತ ನಿನ್ನ ನೇಗಿ ಸಾಪ  ಹೆಣಾ ...............
ಒಂದ್ಸಲ ನೇಗಿಯಾಡ ಕಾಂಬ
ಕಣ್ಣ ತುಂಬಾ ಕಾಂಬ ಆಸಿ ನಂಗಾ  ....... 
ಅದೆಲ್ಲ  ಹೊಯಿಲಿ ಬಿಡ ಇಗಾ 
ಮುಡಲಾಯಿ ಮೋಡ ಕಾಣ
ಮೋಡದ ಹಿಂದೆ ಕಾಮನ ಬಿಲ್ಲ ಕಾಣ
ಅದೆಲ್ಲ ನಿನ್ನ  ಚೆಂದದ ಹುಬ್ಬಿಗೆ ಸಮಾ..........
 ಮಳಿಗಾಲದ್ದ ಮಿಂಚ ಹುಳ ನಿನ
ನಿನ್ನ ಕಂಡ ಹಾಡ ಹೇಳು ಕೊಂಗಿಲಿ ಹಕ್ಕಿ ನಾನ್
 ನಿನ್ನ ಆಂದು  ಕಂಡ ನಾಚ್ಕಂತ  ನಾಚಿಕಿ ಮುಳ್ಳು
ನಿನ್ನ ಮುಂದೆ  ಶ್ರೀದೇವಿ ಚಂದೂ ಸುಳ್ಳು ...................
 ನಾಳಿಗೂ ಬತ್ತಿ ನಾ ಇದೆ ಮಿನ ಪ್ಯಾಟಿಗೆ
ಎರಡ್ ಮಿನ ಜಾಸ್ತಿ ಹಾಕ್ರೆ ಹಾಡ ಹೇಳ್ತಿ ಸಂತಿ ಕಟ್ಟಿಯಗೆ

ಭಾನುವಾರ, ಜೂನ್ 10, 2012


ಮುಡಿಯ ಬಿಜ ಮನೆಯ ಒಳಗಿದೆ 

ಮುಂಗಾರಿನ  ಮಳೆಗಾಗಿ ಕಾಯುತಿದೆ 
ಮಳೆರಾಯನ ಮಿಲನದ ಕನಸ ನೆಯುತಿದೆ ..... ..... .
 
ಕರುವೊಂದು ಅಂಬಾ ಎನ್ನುತ್ತಿದೆ ಹಟ್ಟಿಯಲ್ಲಿ
ಕುಳ ಕಾಳು ಖಾಲಿಯಾಗಿದೆ ಮನೆಯ  ಪೆಟ್ಟಿಗೆಯಲ್ಲಿ ....
 
ನೇಗಿಲ ಯೋಗಿಯ ಕುತ್ತಿಗೆಯಲಿ ನೋವಿದೆ
ಮಳೆಗಾಗಿ ಬಾನ ಕನಸು  ಕಂಡು ಸಾಕಾಗಿದೆ ....
 
ಇಳಿದು ಬಾ ಮಳೆ ರಾಯ ಇಳಿದು ಬಾ
ಬಡವ ಕಾದಿಹಿನಿಲ್ಲಿ ಇಳಿದು ಬಾ ........