ಪುಟಗಳು

ಶನಿವಾರ, ಜುಲೈ 21, 2012

ಭತ್ತ ಮಾತ್ರ ತೆಗೆದಿರುವ ಕೆಂಪು ಅಕ್ಕಿ (ಚ್.ಕೆ.ಸತ್ಯಪ್ರಕಾಶ್)

ಭತ್ತ ಮಾತ್ರ ತೆಗೆದಿರುವ ಕೆಂಪು ಅಕ್ಕಿ

ಭತ್ತ ಮಾತ್ರ ತೆಗೆದಿರುವ ಕೆಂಪು ಅಕ್ಕಿ


ಭತ್ತ ಮಾತ್ರ ತೆಗೆದಿರುವ ಕೆಂಪು ಅಕ್ಕಿಯನ್ನೇ ಯಾವಾಗಲೂ ಊಟಕ್ಕೆ ಉಪಯೋಗಿಸಿ ಆನಂದವನ್ನು ಪಡೆಯಿರಿ. ಈ ಅಕ್ಕಿಗೆ ಆಡು ಭಾಷೆಯಲ್ಲಿ ಕೆಂಪು ಮುಂಡಗ ಅಕ್ಕಿ ಅಥವಾ ಕಜ್ಜಾಯ ಅಕ್ಕಿ ಎಂದೂ ಕರೆಯುತ್ತಾರೆ. ಈ ಅಕ್ಕಿಯಲ್ಲಿ ಬೇಕಾದಷ್ಟು ಪೌಷ್ಟಿಕಾಂಶಗಳು ಇವೆ. ಹೊರಗಡೆ ಯಾವುದೇ ಅಂಗಡಿಯಲ್ಲಿ ಇದು ದೊರಕುವಂತಾದ್ದಲ್ಲ. ಕೋಟಿ ರೂಪಾಯಿಗಳನ್ನು ಕೊಟ್ಟರೂ ಸಿಗುವುದಿಲ್ಲ. ಊಟ ಮಾಡುತ್ತಿರುವಾಗಲೇ ಈ ಪೌಷ್ಟಿಕಾಂಶಗಳು ದೇಹದಲ್ಲಿರುವ ಎಲ್ಲ ಕಸಕಡ್ಡಿಗಳನ್ನೂ, ಅತಿಯಾದ ವಾತ ಪಿತ್ತ ಕಫಗಳನ್ನೂ, ಯಾವುದೇ ರೀತಿಯ ಬೆನ್ನುನೋವು, ತಲೆನೋವು, ಸೊಂಟನೋವು, ಕಾಲುನೋವು, ತಲೆಭಾರ, ನಿದ್ರೆ ಸರಿಯಾಗಿ ಬಾರದಿರುವುದು, ಕೊಲೆಸ್ಟರಾಲನ್ನು ಪೂರ್ತಿಯಾಗಿ ಕರಗಿಸುವುದು. ಮುಂದೆ ಎಂದೆಂದಿಗೂ ಕೊಲೆಸ್ಟರಾಲ್ ದೇಹದಲ್ಲಿ ಸೇರಲು ಅವಕಾಶ ಕೊಡುವುದಿಲ್ಲ, ಬ್ಲಡ್ ಶುಗರನ್ನು ೧೦೦ ಕ್ಕೆ ೧೦೦ ರಷ್ಟು ಕಡಿಮೆಮಾಡುವುದು. ಇದನ್ನೆಲ್ಲ ವಿಜ್ನಾನಿಗಳು ದೃಡಪಡಿಸಿದ್ದಾರೆ. ಮನೆಯಲ್ಲಿ ಪಿ.ಸಿ. ಇದ್ದು ಇಂಟರ್ನೆಟ್ ಹಾಕಿಸಿಕೊಂಡಿರುವವರು ಗೂಗಲ್ ನಲ್ಲಿ ಜಾಲಾಡಿನೋಡಿ. ಈ ಕಜ್ಜಾಯ ಅಕ್ಕಿಗೆ ೧೦೦ ಕ್ಕೆ ೧೦೦ ರಷ್ಟು ಕ್ಯಾನ್ಸರ್ ವಾಸಿಮಾಡುವ ಶಕ್ತಿ ಇದೆ.


ಇದಲ್ಲದೆ ಆಸಿಡಿಟಿ, ಗ್ಯಾಸ್ಟ್ರೈಟಿಸ್, ಬೊಜ್ಜು ಈ ಎಲ್ಲವೂ ೧೦೦% ವಾಸಿಯಾಗುತ್ತದೆ. ಇದಲ್ಲದೇ ಮುಖವೂ ಕಾಂತಿಯುಕ್ತವಾಗುತ್ತದೆ. ಕಣ್ಣುಗಳು ಮಿನುಗುತ್ತವೆ. ಚಟುವಟಿಕೆ ಜಾಸ್ತಿಯಾಗುತ್ತದೆ. ಊಟ ಮಾಡಿದ ತಕ್ಷಣ ಹೊಟ್ಟೆ ಭಾರವಾಗುವುದಿಲ್ಲ. ಬ್ಲೋಟಿಂಗ್ ಅನುಭವ ಇರುವುದಿಲ್ಲ. ಹೊಟ್ಟೆಯಲ್ಲಿ ಸಂಕಟವಾಗುವುದೂ ನಿಂತುಹೋಗುತ್ತದೆ. ಹೊಟ್ಟೆ ಯಾವಾಗಲೂ ತಂಪಾಗಿರುತ್ತದೆ. ಮಲಬದ್ದತೆ ನಿರ್ನಾಮವಾಗಿ ದೊಡ್ಡಕರುಳಿನಲ್ಲಿ ಕಟ್ಟಿಕೊಂಡಿರುವ ಅತ್ಯಂತ ಕಟ್ಟಕಡೆ ಪಾಚಿಯೂ ಸಹ ಕೊಚ್ಚಿಕೊಂಡು ಹೋಗುತ್ತದೆ. ಮಲವಿಸರ್ಜನೆಯ ಬಳಿಕ ದೇಹ ಮತ್ತು ಮನಸ್ಸು ಆನಂದಮಯವಾಗುತ್ತದೆ. ಪ್ರತಿದಿನ ಮಲವಿಸರ್ಜನೆಯ ನಂತರ ದೇಹ ಮತ್ತು ಮನಸ್ಸು ಹಗುರವಾಗಿ ಚಟುವಟಿಕೆಯಿಂದ ಕೂಡಿರುತ್ತದೆ. ಕೆಂಪು ಅಕ್ಕಿಯಲ್ಲಿರುವ ಅತ್ಯಂತ ಶಕ್ತಿ ಬೇರೆ ಯಾವುದೇ ಇಲ್ಲ ಎಂದು ಕಾಣಿಸುತ್ತದೆ. ಎಲ್ಲ ಧಾನ್ಯಗಳಿಗೂ ತನ್ನದೇ ಆದ ಶಕ್ತಿ ಇರುತ್ತದೆ. ಎಲ್ಲಾ ಕಾಲಕ್ಕೂ ಹೊಟ್ಟಿನಿಂದ ಕೂಡಿದ ಕೆಂಪು ಅಕ್ಕಿಯೇ ಸರ್ವಶ್ರೇಷ್ಟ ವಾದುದು.


ಬರೆದವರು : ಹೆಚ್.ಕೆ.ಸತ್ಯಪ್ರಕಾಶ್
೯೮೮೬೩ ೩೪೬೬೭

ಕಾಮೆಂಟ್‌ಗಳಿಲ್ಲ: